8:31 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನ 244 ಸದಸ್ಯರ ಪಟ್ಟಿಗೆ  ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು

23/05/2021, 18:53

ಮಂಗಳೂರು(reporterkarnataka news): ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನ 244 ಸದಸ್ಯರ ಪಟ್ಟಿಯಲ್ಲಿ ಸೇರಿದ್ದು, ಯೆನೆಪೋಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ಅವರು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನ ಮೂಲಕ ಯೆನೆಪೋಯ ಆಸ್ಪತ್ರೆಗೆ 5 ಲೀಟರ್ ಸಾಮರ್ಥ್ಯದ 46 ಅಮ್ಲಜನಕ ಸಾಂದ್ರಕಗಳು, 46 ವೋಲ್ಟೆಜ್ ಅಡಾಪ್ಟರ್‌ಗಳು ಮತ್ತು  11,500 ಎನ್  95 ಮುಖಕವಚಗಳನ್ನು ಉಚಿತವಾಗಿ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನ ನಿರ್ದೇಶಕ ಡಾ.ಆರ್.ಎ.ಬಾದ್ವ ಮತ್ತು ಮುಂಬೈನ ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನ ಸಂಯೋಜಕ ಡಾ.ಸಿ.ಎಸ್.ಪ್ರಮೇಶ್ ಹಲವಾರು ವೆಬಿನಾರ್ ಆಯೋಜಿಸುವ ಮೂಲಕ ಕೋವಿಡ್-19

ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ ಸಾಕಷ್ಟು ಉಪ ಕ್ರಮಗಳನ್ನು ಕೈಗೊಂಡಿದ್ದರು. ಹಾಗೂ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ನಿರ್ವಹಣೆಗಾಗಿ ಶ್ರಮಿಸಿದ್ದರು. ಸದ್ಯ ನಮ್ಮ ದೇಶ ಎದುರಿಸುತ್ತಿರುವ ಎರಡನೇ ಅಲೆಯಲ್ಲಿ ಕೋವಿಡ್ ರೋಗಿಗಳಿಗೆ ಅಮ್ಲಜನಕ ಸಾಂದ್ರಕಗಳನ್ನು ಚಿಕಿತ್ಸೆ ನೀಡುವ ಕೇಂದ್ರಗಳಿಗೆ ವಿತರಿಸುವ ಮೂಲಕ ಅಗತ್ಯ ನೆರವನ್ನು ನೀಡುತ್ತಲಿದ್ದಾರೆ ಹಾಗೂ ಬಹುರಾಷ್ಟ್ರೀಯ ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ ಎಂದು ಯೆನೆಪೋಯ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು