8:30 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು