1:58 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು