4:10 PM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು