8:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು