4:55 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು