9:13 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುವ ಗುಂಡಿ: ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

22/09/2024, 13:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169A ಶಿವಮೊಗ್ಗ ತೀರ್ಥಹಳ್ಳಿ ಆಗುಂಬೆ ಮಂಗಳೂರು ಸಂಪರ್ಕಿಸುವ ರಸ್ತೆ ಗುಡ್ಡೆಕೇರಿ ಸಮೀಪ ಕೌರಿಹಕ್ಕಲು ಬಳಿ ರಸ್ತೆಯ ಮಧ್ಯದಲ್ಲಿ ಮೂರು ನಾಲ್ಕು ಬೃಹತ್ ಗಾತ್ರದ ಹೊಂಡಗಳು ಬಿದ್ದು ಅ ಹೊಂಡದಲ್ಲಿ ರಸ್ತೆ ಕಾಂಕ್ರೀಟ್ ಗೆ ಬಳಸಿದ ಕಬ್ಬಿಣದ ರಾಡ್ ಗಳು ಎದ್ದು ನಿಂತಿದೆ. ಈ ಗುಂಡಿ ಇತ್ತೀಚೆಗೆ ಮೂರು ನಾಲ್ಕು ತಿಂಗಳುಗಳಿಂದ ಹಿಗೆ ಕಬ್ಬಿಣದ ರಾಡ್ ಕಾಣುವಂತೆ ಇದ್ದರು ಕೂಡ ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳು ಇದೆ ರಸ್ತೆಯಲ್ಲಿ ಪ್ರತಿ ದಿನ ಓಡಾಟ ಮಾಡುತ್ತಿದ್ದರು ಕೂಡ ಈ ಹೊಂಡ ಗುಂಡಿ ಗಮನಿಸಲಿಲ್ಲವೆ ಎನ್ನುವ ಮಾತು ಕೂಡ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.


ಈಗಾಗಲೇ ಕಾಂಕ್ರೀಟ್ ಸ್ಲ್ಯಾಬ್ ಬಾಯಿ ತೆರೆದ ಗುಂಡಿಗಳು ಹಾಗೆಯೇ ಬಾಯ್ತೆರೆದುಕೊಂಡಿದ್ದು ಕಬ್ಬಿಣದ ರಾಡ್ ಕಾಣುತ್ತಿದ್ದರು ಅಪಾಯಕ್ಕೆ ಆಹ್ವಾನ ನಿಡುತ್ತಿದ್ದರು. ಅದನ್ನು ಮುಚ್ಚುವ ಇಲ್ಲವೆ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೆ ಹೋಗದಿರುವುದು ರಾಷ್ಟ್ರೀಯ ಹೆದ್ದಾರಿ ಅದಿಕಾರಿಗಳ ಬೆಜಾವಬ್ದರಿ ಎದ್ದು ತೋರಿಸುತ್ತಿದೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ ಎಲ್ಲಿಯಾದರೂ ರಾತ್ರಿ ಸಮಯದಲ್ಲಿ ವಾಹನ ಓಡಾಡುವ ಸಂದರ್ಭದಲ್ಲಿ ಹೊಂಡಕ್ಕೆ ಬಿದ್ದು ಟಯರ್ ಪಂಕ್ಚರ್ ಆಗಿ ಯಾವುದಾದರೂ ಅನಾಹುತವಾದರೆ ಯಾರು ಹೊಣೆ? ಆ ಗುಂಡಿಯಿಂದ ಎದ್ದು ನಿಂತ ಕಬ್ಬಿಣದ ರಾಡ್ ರಸ್ತೆಯಲ್ಲಿ ಓಡಾಡುವ ವಾಹನ ಸವಾರರ ಪ್ರಾಣಕ್ಕೆ ಅಪಾಯವಾಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಮೂಲಕ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವಾಹನ ಸವಾರರು ಮತ್ತು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು