6:01 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ: ಪರಿಹಾರ ನೀಡದೆ ವಂಚನೆ; 22ರಿಂದ 20 ಗ್ರಾಮದ ಸಂತ್ರಸ್ತರಿಂದ ಧರಣಿ

18/08/2023, 21:02

ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೇ 25 ರಷ್ಟು ಕೂಡ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ರಸ್ತೆ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ. ಇದರ ವಿರುದ್ಧ ಇದೇ 22ರಿಂದ 29 ರವರಿಗೆ ಎನ್ಎಚ್ಎಐ ಯೋಜನಾ ಕಚೇರಿ ಎದುರು 20 ಗ್ರಾಮಗಳ ಸಂತ್ರಸ್ತರು ಧರಣಿ ನಡೆಸುತ್ತೇವೆ ಎಂದು ಭೂ ಮಾಲೀಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳದ ಸಾಣೂರಿನಿಂದ ಮಂಗಳೂರಿನ ನಂತೂರು ವೃತ್ತದವರೆಗೆ ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬೀಳುತ್ತಿದೆ ಎಂದರು.
ನಂತೂರಿನ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ
ಕಳೆದ ಮಾರ್ಚ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಆದರೆ ಈಗ 4 ತಿಂಗಳಾದರೂ ಯಾವುದೇ ಸುದ್ದಿಯೇ ಇಲ್ಲ. ಒಂದು ತಿಂಗಳಲ್ಲಿ ಪರಿಹಾರ ತೆಗೆಸಿಕೊಡುತ್ತೇನೆ ಎಂದು ಹೇಳಿದ ಅಧಿಕಾರಿ ಕೂಡ ನಾಪತ್ತೆ ಆದರು. 5 ತಿಂಗಳು ಕಳೆದರೂ ಭೂಸ್ವಾಧೀನಕ್ಕೆ ಪರಿಹಾರ ನೀಡುವ ಬಗ್ಗೆ ಪ್ರಕ್ರಿಯೆ ಆಗಿಲ್ಲ. ಹೈಕೋರ್ಟ್ ನಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆದೇಶ ನೀಡಿದರೂ ಅಧಿಕಾರಿಗಳು ಪತ್ರವ್ಯವಹಾರ ಮಾಡುವುದರಲ್ಲಿಯೇ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
2020ರ ಮಾರುಕಟ್ಟೆ ದರದ ಪ್ರಕಾರ, ಭೂಮಿಗೆ ಪರಿಹಾರ ನೀಡಲು ಆದೇಶ ನೀಡಲಾಗಿತ್ತು. ಈಗ ಮೂರು ವರ್ಷ ಕಳೆದಿದ್ದು, ಭೂಮಿಗೆ ಬೆಲೆ ಜಾಸ್ತಿ ಆಗಿದೆ. ಸೂಕ್ತ ಪರಿಹಾರಕ್ಕಾಗಿ ನಾವು ಮತ್ತೆ ಧರಣಿ ನಡೆಸುವುದು ಅನಿವಾರ್ಯ ಆಗಿದೆ. ಬೆಳಿಗ್ಗೆಯಿಂದ ಸಂಜೆಯ ವರೆಗೆ ದಿನವೂ ಧರಣಿ ನಡೆಸಲಿದ್ದೇವೆ ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಅವರ ಹೆಸರಿನಲ್ಲಿ ಬಿಜೆಪಿ ಮಾಹಿತಿ ವಿಭಾಗವು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಪದವು ಗ್ರಾಮದ ಎರಡೂವರೆ ಎಕರೆ ಜಾಗದ ಸ್ವಾಧೀನಕ್ಕೆ 200 ಕೋಟಿ ಬಿಡುಗಡೆ ಆಗಿದೆ ಎಂದು ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದಾರೆ. ದಾಖಲೆ ಕೇಳಿದರೆ ಅವರಿಂದ ಯಾವುದೇ ಉತ್ತರ ಇಲ್ಲ. ಸುಳ್ಳು ಹೇಳಿ ಜನರನ್ನು ಮೋಸ ಮಾಡುವುದುನ್ನು ನಿಲ್ಲಿಸಬೇಕು. ಕಳೆದ ನಾಲ್ಕು ವರ್ಷಗಳಲ್ಲಿ 12 ಮಂದಿ ವಿಶೇಷ ಭೂಸ್ವಾಧೀನ ಅಧಿಕಾರಿ ಬದಲಾಗಿದ್ದಾರೆ. ಒಬ್ಬ ಅಧಿಕಾರಿ ಬಂದು ತಿಂಗಳು ಕಳೆಯುವಾಗ ಮತ್ತೊಬ್ಬ ಬರುತ್ತಾರೆ ಎಂದು ಸಂತ್ರಸ್ತ ಹೋರಾಟಗಾರ ರತ್ನಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ವಿಶ್ವಜಿತ್, ಪ್ರಕಾಶ್ಚಂದ್ರ, ಜಯರಾಂ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು