6:25 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ನಿರ್ವಹಣೆಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ

16/06/2024, 12:59

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಎನ್.ಹೆಚ್. 73 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಮತ್ತು ಮಳೆಗಾಲದ ಸಮಯ ಉಂಟಾಗುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ವೀಕ್ಷಣೆ ನಡೆಸಿ, ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದ್ದರು.


ಅದರಂತೆ ವಿವಿಧ 21 ಕಡೆಗಳಲ್ಲಿ ಸೂಕ್ತವಾದ ದುರಸ್ತಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿವ೯ಹಿಸಿದೆ.
ರಸ್ತೆ ಬದಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿಗಳನ್ನು ನಿರ್ಮಿಸಲಾಗಿದ್ದು, ರಸ್ತೆ ಸಂಚಾರ ಸುಗಮವಾಗುವಂತೆ ಹಾಗೂ ಶಾಲಾ ವಠಾರ, ಬಸ್ಸು ನಿಲ್ದಾಣಗಳ ಬಳಿ ಕೆಸರು ನಿಲ್ಲದಂತೆ ಕ್ರಮವಹಿಸಲಾಗಿದೆ.
ಈ ಹೆದ್ದಾರಿ ಕಾಮಗಾರಿಗಳ ನಿರ್ವಹಣೆ ಬಗ್ಗೆ ಸಾರ್ವಜನಿಕರು ಇನ್ನೂ ಯಾವುದೇ ಸಮಸ್ಯೆಗಳು ಎದುರಿಸುತ್ತಿದ್ದರೆ ಅಥವಾ ಸಂಚಾರದಲ್ಲಿ ಸಮಸ್ಯೆ ಉಂಟಾಗುತ್ತಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್ ರೂಂ ಸಂಖ್ಯೆ: 0824-2220588 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು