3:20 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: 14,840 ಪ್ರಕರಣಗಳು ಇತ್ಯರ್ಥ; 17. 97 ಕೋಟಿ ರೂ.ಪರಿಹಾರ ವಸೂಲು

09/09/2023, 22:31

ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 48 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 21,763 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 17,97,64,778 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು