5:40 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: 19,666 ಪ್ರಕರಣಗಳುಇತ್ಯರ್ಥ; 22,19,35,765 ಕೋಟಿ ರೂ. ಪರಿಹಾರ ವಸೂಲು

11/07/2023, 16:38

ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಜು.8ರ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 50 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 24,303 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 19,666 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 22,19,35,765 ಕೋಟಿ ರೂ.ಗಳ ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು