1:05 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ಪೊಲೀಸ್ ಸಿಬ್ಬಂದಿಗಳು ಜನಸ್ನೇಹಿಯಾಗಲು ಕಮಿಷನರ್ ಶಶಿಕುಮಾರ್ ಕರೆ

15/01/2023, 09:31

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಹಾಗೂ ಫಾರಂ ಫಿಝ ಮಾಲ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ಉದ್ಘಾಟನಾ ಸಮಾರಂಭ ಫಾರಂ ಫಿಝ ಮಾಲ್ ನಲ್ಲಿ ಜರುಗಿತು.


ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸಮಾರಂಭ ಉದ್ಘಾಟಿಸಿದರು.



ಅವರು ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಿ ಎಂದು ಕರೆ ನೀಡಿದರು.
ಸಾರ್ವಜನಿಕರು ಆದರ್ಶ ನಾಗರಿಕರಾಗಿ ಬದುಕುವುದು ಮಂಗಳೂರು ಜನತೆಯಿಂದಲೇ ಪ್ರಾರಂಭಿಸಲಿ. ಕಾನೂನು ಪಾಲನೆ ಮಾಡಿ ಸಂಚಾರ ನಿಯಮವನ್ನು ಪ್ರೀತಿಸಿ, ರೂಡಿಸಿಕೊಳ್ಳಿ. ನಿಮ್ಮ ಪ್ರಾಣವನ್ನು ಉಳಿಸುವ ಸ್ವಾರ್ಥಿಗಳಾಗಿ ವಾಹನ ಚಲಾವಣೆ ಸಮಯದಲ್ಲಿ ಜಾಗರೂಕರಾಗಿರಿ. ಅಪಘಾತ ಮುಕ್ತ ನಗರವನ್ನಾಗಿಸುವಲ್ಲಿ ಕೈ ಜೋಡಿಸೋಣ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಉಪ ಪೊಲೀಸ್ ಆಯುಕ್ತ ಅಂಶು ಕುಮಾರ್, ಮಂಗಳೂರು ನಗರ ಸಿ.ಎ.ಆರ್ ಉಪ ಪೊಲೀಸ್ ಆಯುಕ್ತ ಪಿ. ಉಮೇಶ್, ಡಿಸಿಪಿ ದಿನೇಶ್ ಕುಮಾರ್ ಹಾಗೂ ವಿಶೇಷ ಆಹ್ವಾನಿತರಾಗಿ ದೇರಳಕಟ್ಟೆ ಯೆನಾಪೋಯ ಡೆಂಟಲ್ ಕಾಲೇಜ್ ಮ್ಯಾಕ್ಸಿಲೋ ಫೆಸಿಯಲ್ ಸರ್ಜಾನ್, ಪ್ರೊಫೆಸರ್ ಅಂಡ್ ಹೆಚ್. ಓ.ಡಿ ಡಾ. ಜಗದೀಶ್ ಚಂದ್ರ, ಮಂಗಳೂರು ಫೀಝ ಮಾಲ್ ನ ಸೆಂಟರ್ ಹೆಡ್ ಅರವಿಂದ ಶ್ರೀ ವಾತ್ಸವ, ಉಪಸ್ಥಿತರಿದ್ದರು.


ಮಂಗಳೂರು ಸಿಟಿ ಟ್ರಾಫಿಕ್ ಪೊಲೀಸ್ ಎಸಿಪಿ.ಗೀತಾ ಕುಲಕರ್ಣಿ ಕಾರ್ಯಕ್ರಮದ ಆಯೋಜಕರಾಗಿದ್ದರು.
ಮಂಗಳೂರು ಪೂರ್ವ ಸಂಚಾರ ವಿಭಾಗ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣಭಟ್ ಸೇರಿದಂತೆ ವಿವಿಧ ಟ್ರಾಫಿಕ್ ಠಾಣಾ ಇನ್ಸ್ಪೆಕ್ಟರ್ ಗಳು, ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರವೀಶ್ ಕುಮಾರ್,ದಿನಕರ್,ಪೊಲೀಸ್ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಸಂಚಾರಪಾಲನೆಯ ಭಿತ್ತಿಚಿತ್ರಗಳನ್ನು ಅನಾವರಣಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು