12:14 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು