4:43 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು