2:45 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣೆ

19/10/2022, 10:22

ಉಡುಪಿ(reporterkarnataka.com): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು. ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ, ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ. ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.
15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು.


ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು