2:45 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ 

03/10/2021, 23:21

ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು  

ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯ ಮೂಲಕ ಪ್ರಾರಂಭವಾಯಿತು. ಬಂದಿರುವ ಎಲ್ಲಾ ಅತಿಥಿಗಳು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಲಾಯಿತು.

ಕೆಲವು  ವಿದ್ಯಾರ್ಥಿಗಳು ಗಾಂಧೀಜಿ ಯವರ ಜೀವನ ಶೈಲಿಯ ಬಗ್ಗೆ ಭಾಷಣಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅತಿಥಿಗಳು ಗಾಂಧೀಜಿಯ ಜೀವನದ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾರಿ ಹೇಳಿದರು


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಗೋಮುಖ ವಹಿಸಿದ್ದರು.

ಅತಿಥಿಗಳಾಗಿ ರಾಮ  ಜೋಹಿಷರು (ಗೌರವ ಅಧ್ಯಕ್ಷರು ಕುಡಿಪ್ಪಾಡಿ ಶಾಲೆ ಮತ್ತು ಉಪಾಧ್ಯಕ್ಷರು ಗ್ರಾಮವಿಕಾಸನ ಸಮಿತಿ) ಅವರು ವಹಿಸಿದ್ದರು. 

ಈ ಸಂದರ್ಭದಲ್ಲಿ  ವಿವೇಕಾನಂದ ಕಾಲೇಜಿನ ಉಪನ್ಯಾಸಕರು, ಕುಡಿಪ್ಪಾಡಿ ಶಾಲೆಯ ಶಿಕ್ಷಕರು ಗ್ರಾಮ ಸಮಿತಿಯ ಸದಸ್ಯರು, ಗ್ರಾಮಸ್ಥರು, ಮಕ್ಕಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸಂಸ್ಥೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಕುಡಿಪ್ಪಾಡಿ ಶಾಲೆಯ ಮುಖ್ಯೋಪಾಧ್ಯಾಯಿನಿ  ವಿಜಯ ಪಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸ್ವಯಂ ಸೇವಕರು ಗ್ರಾಮಸ್ಥರು ಮತ್ತು ಮಕ್ಕಳು ಸ್ವಚ್ಛತಾ ಕಾರ್ಯಕ್ರಮ ಮತ್ತು  ಗಿಡ ನೆಡುವ ಕಾರ್ಯ ವನ್ನು ಹಮ್ಮಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು