12:05 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ 

03/10/2021, 23:21

ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು  

ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯ ಮೂಲಕ ಪ್ರಾರಂಭವಾಯಿತು. ಬಂದಿರುವ ಎಲ್ಲಾ ಅತಿಥಿಗಳು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಲಾಯಿತು.

ಕೆಲವು  ವಿದ್ಯಾರ್ಥಿಗಳು ಗಾಂಧೀಜಿ ಯವರ ಜೀವನ ಶೈಲಿಯ ಬಗ್ಗೆ ಭಾಷಣಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅತಿಥಿಗಳು ಗಾಂಧೀಜಿಯ ಜೀವನದ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾರಿ ಹೇಳಿದರು


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಗೋಮುಖ ವಹಿಸಿದ್ದರು.

ಅತಿಥಿಗಳಾಗಿ ರಾಮ  ಜೋಹಿಷರು (ಗೌರವ ಅಧ್ಯಕ್ಷರು ಕುಡಿಪ್ಪಾಡಿ ಶಾಲೆ ಮತ್ತು ಉಪಾಧ್ಯಕ್ಷರು ಗ್ರಾಮವಿಕಾಸನ ಸಮಿತಿ) ಅವರು ವಹಿಸಿದ್ದರು. 

ಈ ಸಂದರ್ಭದಲ್ಲಿ  ವಿವೇಕಾನಂದ ಕಾಲೇಜಿನ ಉಪನ್ಯಾಸಕರು, ಕುಡಿಪ್ಪಾಡಿ ಶಾಲೆಯ ಶಿಕ್ಷಕರು ಗ್ರಾಮ ಸಮಿತಿಯ ಸದಸ್ಯರು, ಗ್ರಾಮಸ್ಥರು, ಮಕ್ಕಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸಂಸ್ಥೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಕುಡಿಪ್ಪಾಡಿ ಶಾಲೆಯ ಮುಖ್ಯೋಪಾಧ್ಯಾಯಿನಿ  ವಿಜಯ ಪಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸ್ವಯಂ ಸೇವಕರು ಗ್ರಾಮಸ್ಥರು ಮತ್ತು ಮಕ್ಕಳು ಸ್ವಚ್ಛತಾ ಕಾರ್ಯಕ್ರಮ ಮತ್ತು  ಗಿಡ ನೆಡುವ ಕಾರ್ಯ ವನ್ನು ಹಮ್ಮಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು