5:09 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರೇಶನ್ ಕಾರ್ಡ್ ವಿಚಾರದಲ್ಲಿ ಬಿಜೆಪಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ

23/11/2024, 17:02

ಮಂಗಳೂರು(reporterkarnataka.com): ಯಾವುದೇ ಅಭಿವೃದ್ಧಿ ಕಾರ್ಯದ ಪರ ನಿಲ್ಲದ ರಾಜ್ಯದ ಪ್ರತಿಪಕ್ಷವಾದ ಬಿಜೆಪಿಯು ರೇಶನ್ ಕಾರ್ಡ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಗೊಂದಲ ಉಂಟು ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಪಾದಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ 5.80 ಕೋಟಿ ರೇಶನ್ ಕಾರ್ಡ್ ಗಳನ್ನು ರದ್ದುಮಾಡಿದೆ.
ಇದರ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಬಾಯಿ ಬರುವುದಿಲ್ಲ. ಕೇಂದ್ರ ಸರಕಾರದ ನಿರ್ದೇಶನ ಪಾಲಿಸುವುದು ರಾಜ್ಯ ಸರಕಾರಗಳ ಧರ್ಮವೂ ಆಗಿದೆ. ಆದರೆ ಬಿಜೆಪಿಗರು ರಾಜ್ಯ ಸರಕಾರ ರೇಶನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಪಿಎಲ್ ಕಾರ್ಡ್ ನ ಅರ್ಹತೆ ಇಲ್ಲದವರನ್ನು ಎಪಿಎಲ್ ಕಾರ್ಡ್ ಗೆ ಸೇರಿಸುವುದು ಸಹಜ ಪ್ರಕ್ರಿಯೆಯಾಗಿದೆ. ಈ ಸಂದರ್ಭದಲ್ಲಿ ಕೆಲವೊಂದನ್ನು ಅಮಾನತಿನಲ್ಲಿಟ್ಟಿರುವ ಸಾಧ್ಯತೆಗಳೂ ಇವೆ. ನಿಜವಾದ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗಿದ್ದಲ್ಲಿ ಸರಕಾರ ಕೂಡಲೇ ಅದನ್ನು ಸರಿಪಡಿಸಲಿದೆ ಎಂದು ಅವರು ನುಡಿದರು.

ವಕ್ಫ್ ನೋಟಿಸ್ ಜಾರಿ ಮಾಡಿರುವುದು ಇದೇ ಮೊದಲೇನಲ್ಲ. 2019ರಿಂದ ಬಿಜೆಪಿ ಸರಕಾರ ಕೂಡ ನೋಟಿಸ್ ಜಾರಿ ಮಾಡಿದೆ. ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಕೂಡ 226 ನೋಟಿಸ್ ಗಳನ್ನು ಜಾರಿ ಮಾಡಿದೆ. ರೈತರಿಗೆ, ದೇವಾಲಯ, ಮಠ- ಮಂದಿರಕ್ಕೆ ಸೇರಿದ ಒಂದಿಚ್ಚು ಜಾಗವನ್ನೂ ಯಾವುದೇ ದಾಖಲೆಗಳಿಲ್ಲದೆ ವಕ್ಫ್ ಗೆ ಕೊಡುವ ಪ್ರಶ್ನೆಯೇ ಇಲ್ಲ ಎಂದವರು ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು