1:52 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು