12:44 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು