11:20 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು