8:04 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

05/10/2023, 13:07

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು.
ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯ ಸರಕಾರ ಕೊಡ ಮಾಡುವ 2022-23 ನೇ ಸಾಲಿನ “ಗಾಂಧಿ ಗ್ರಾಮ” ಪುರಸ್ಕಾರದ ಗರಿ ಲಿಂಗಸೂರು
ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯತ್ ಮುಡಿಗೇರಿಸಿಕೊಂಡ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಪಂ ಅಧ್ಯಕ್ಷ ಸಿದ್ದಪ್ಪ , ಉಪಾಧ್ಯಕ್ಷ ರತ್ನಮ್ಮ,ಪಿಡಿಓ ಶಶಿಕಲಾ ಪಾಟೀಲ್ ಅವರಿಗೆ ಗ್ರಾಮಿಣಾಭಿವೃದ್ದಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ 2013-14ನೇ ಸಾಲಿನಿಂದ ಗ್ರಾಮ ಪಂಚಾಯತ ಸಾಧನೆಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ಗಳ ಮೂಲಕ ಮೌಲ್ಯಮಾಪನ ಮಾಡಿ,ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯತ್ ಗಳಲ್ಲಿ ಪ್ರಶಸ್ತಿಗಾಗಿ ಗೂಗಲ್ ತಂತ್ರಾಂಶದ ಮೂಲಕ ಅರ್ಜಿ ಸ್ವೀಕರಿಸಿ ಅವುಗಳಲ್ಲಿ ತಾಲೂಕೀಗೆ ಒಂದರಂತೆ ಗ್ರಾಮ ಪಂಚಾಯತ ಆಯ್ಕೆ ಮಾಡಿ, ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡುವ ಜೊತೆಗೆ 5.00 ಲಕ್ಷ ರೂ. ಪ್ರೋತ್ಸಾಹ ನೀಡಿ ಗೌರವಿಸಲಾಗುತ್ತದೆ.

ಪುರಸ್ಕಾರ ಖುಷಿ ತಂದಿದೆ : ಗಾಂಧಿ ಗ್ರಾಮ ಪುರಸ್ಕಾರ ಖುಷಿ ತಂದಿದೆ. ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಾಗರಿಕರ ಸಹಕಾರದೊಂದಿಗೆ ಅನೇಕ ಅಭಿವೃದ್ದಿ ಕಾರ್ಯಗಳು ಕೈಗೊಂಡಿದ್ದು ,ಅಭಿವೃದ್ದಿ ಪಥದತ್ತ ಗ್ರಾಪಂ ಮುನ್ನಡೆಯುತ್ತಿದೆ. ಈ ನಡುವೆ ಪುರಸ್ಕಾರ ದೊರೆತಿದ್ದು ಮತ್ತಷ್ಟು ನಾವುಗಳು ಉತ್ಸಾಹದಿಂದ ಕೆಲಸ ಮಾಡಲು ಉತ್ತೆಜಿಸಿದಂತಾಗಿದೆ ಎಂದು ಗ್ರಾಪಂ ಪಿಡಿಒ
ಶಶಿಕಲಾ ಪಾಟೀಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು