3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು