9:16 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು