9:24 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು