1:26 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ; ಜಿಲ್ಲಾ ಪೊಲೀಸ್ ವರಿಷ್ಠರೇ ಏನು ಹೇಳುತ್ತೀರಿ? 

25/10/2021, 08:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ, ಸಿಂಧನೂರು , ಮಸ್ಕಿ, ಲಿಂಗಸಗೂರು, ಮಾನ್ವಿ ಹಾಗೂ ಗ್ರಾಮೀಣ ಪ್ರದೇಶದ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಸಾರಾಯಿ, ಮಟ್ಕಾ, ಜೂಜಾಟದ ಅಡ್ಡೆಯಾಗುತ್ತಿದೆ.

ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಮಟ್ಕಾ, ಸಾರಾಯಿ ಜೂಜಾಟ, ಇಸ್ಪೀಟ್ ಮುಂತಾದ ಅಕ್ರಮ ದಂಧೆಗಳು ರಾಜಾರೋಷವಾಗಿ ಯಾವುದೇ ಎಗ್ಗಿಲ್ಲದೆ ನಡೆಯುತ್ತಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಯುವಪೀಳಿಗೆ ಸಾರಾಯಿ, ಮಟ್ಕಾ  ಜೂಜಾಟದ ದಾಸರಾಗುತ್ತಿದ್ದಾರೆ. ಇದನ್ನೆಲ್ಲ ತಡೆದ ಸ್ವಸ್ಥ ಸಮಾಜ ನಿರ್ಮಿಸಬೇಕಾದ ಪೊಲೀಸ್ ಇಲಾಖೆ ಮಾತ್ರ ಕೈಕಟ್ಟಿ ಕುಳಿತಿದೆ.

ಅಕ್ರಮ ಚಟುವಟಿಕೆಗಳು ಎಲ್ಲೆಲ್ಲಿ ನಡೆಯುತ್ತಿದೆ ಎನ್ನುವುದು ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಪೋಲೀಸರಿಗೆ ಚೆನ್ನಾಗಿ ಗೊತ್ತಿದ್ದರೂ ಅವರು ತಡೆಗಟ್ಟುವ ನಿಟ್ಟಿನಲ್ಲಿ ಅಸಡ್ಡೆ ತೋರಿಸುತ್ತಿದ್ದಾರೆ. ರಾಯಚೂರಿಗೆ ಹೊಸತಾಗಿ ಬಂದ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿಯವರು ಇದಕ್ಕೆಲ್ಲ ಕಡಿವಾಣ ಹಾಕಬೇಕೆನ್ನುವುದು ನಾಗರಿಕರ ನಿರೀಕ್ಷೆಯಾಗಿದೆ.

ಸಾರಾಯಿ, ಮಟ್ಕಾ, ಜೂಜು, ಇಸ್ಪೀಟ್ ನಿಂದ ಬಡ ಕುಟುಂಬಗಳು ಒಂದೊಂದಾಗಿ ಬೀದಿಗೆ ಬಂದು ಬೀಳುತ್ತಿದೆ. ಮೊದಲೇ ಬೆಲೆಯೇರಿಕೆಯಿಂದ ತತ್ತರಿಸಿರುವ ಜನರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ, ಸಾರಾಯಿ ಮಾತ್ರ ಬೇಕು ಎನ್ನುವ ಪರಿಸ್ಥಿತಿಗೆ ಯುವಕರು ಬಂದು ತಲುಪಿದ್ದಾರೆ. ಯುವಜನಾಂಗ ಬೆಳಗ್ಗೆಯಾಗುತ್ತಿದ್ದಂತೆ ಸಾರಾಯಿ ಅಂಗಡಿ ಕಾಯುತ್ತಿರುತ್ತಾರೆ. ಹೆಂಡತಿಯ ಬಂಗಾರ ಅಡವಿಟ್ಟು, ತಾಯಿಯ ಮಾಂಗಲ್ಯ ಮಾರಿ ಮಟ್ಕಾ ಆಡುವ ಯುವಕರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. 

ಕಾಣದ ಕೈಗಳ ಆಟ: ಪೊಲೀಸ್ ಇಲಾಖೆಗೆ ಅಕ್ರಮ ಚಟುವಟಿಕೆ ತಡೆಯಲು ಕಷ್ಟವೇನಿಲ್ಲ. ಆದರೆ ಅದು ಅವರಿಗೆ ಬೇಕಾಗಿಲ್ಲ.ಕಾಣದ ಕೈಗಳ ಜತೆ ಒಪ್ಪಂದ ನಡೆದಿರುತ್ತದೆ ಎಂದು ನಾಗರಿಕರು ಆರೋಪಿಸುತ್ತಾರೆ.

ಮರಳು ದಂಧೆ : ಇವೆಲ್ಲದರ ಜತೆ ಜಿಲ್ಲೆಯ ತಾಲೂಕು ಕೇಂದ್ರಗಳ ಸಮೀಪವಿರುವ ಲಿಂಗದಹಳ್ಳಿ, ಚಿಂಚೋಡಿ, ಬಾಗೂರು, ಮುದಗೋಟ ಊರುಗಳ ಪಕ್ಕದಲ್ಲಿ ಹರಿಯುವ ಕೃಷ್ಣಾ ನದಿಯಿಂದ ಅಕ್ರಮ ಮರುಳು ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಸರಕಾರದ ಕಣ್ಣು ತಪ್ಪಿಸಿ ಮರುಳುಗಾರಿಕೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು