2:11 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ!

10/09/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸರಾಗುತ್ತಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ, ಹೋಬಳಿ ಮಟ್ಟಗಳಲ್ಲಿ ಅಕ್ರಮ ಚಟುವಟಿಕೆಗಳು ಜೋರಾಗಿ

ನಡೆಯುತ್ತಿದೆ. ಆದರೆ ಪೊಲೀಸ್ ಇಲಾಖೆ  ಸುಮ್ಮನಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿ ಕೊಟ್ಟಿದೆ. ಸಾರ್ವಜನಿಕ  ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.ಬಡ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ.ಯುವಕರಿಗೆ ಸಾರಾಯಿ ಮಾತ್ರ ಬೇಕು. ಇಂದಿನ ದಿನಗಳಲ್ಲಿ ದುಡಿದರು ಜೀವನ ಸಾಯಿಸುವುದು ಕಷ್ಟ. ಹಾಗಿರುವಾಗ ಬೆಳಗ್ಗೆನೇ ಯುವಕರು ಮದ್ಯಕ್ಕೆ ಮೊರೆ ಹೋದರೆ ಹೇಗೆ ಎಂದು ಹಿರಿಯರು ತಲೆ ಬಿಸಿ ಮಾಡಿಕೊಳ್ಳುತ್ತಾರೆ. ಸಾರಾಯಿ ಜತೆ ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಯೂ ಬಹಳಷ್ಟು ಸಕ್ರೀಯವಾಗಿದೆ. ಮನೆ ಸೊತ್ತು ಮಾರಿ ಮಟ್ಕಾ ಆಟವಾಡುತ್ತಿರುವ ಹಲವು ಪ್ರಸಂಗಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಬಡ ಕುಟುಂಬಗಳನ್ನು ರಕ್ಷಿಸ ಬಹುದಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಕುಡಿತದಿಂದ ಸಣ್ಣ ಯುವಕರು ಹಾಳಾಗುತ್ತಿದ್ದಾರೆ. ತಂದೆ-ತಾಯಿಯರ ಕೇಳೋರೆ ಇಲ್ಲ. ಬಡ ಕುಟುಂಬಗಳು ಬೀದಿಗೆ ಬರಬಾರದು, ಯುವಕರು ಹಾಳಾಗಬಾರದು ಎಂದರೆ ಜಿಲ್ಲೆಯ ಪೊಲೀಸರು ತಾವೇ ಖುದ್ದಾಗಿ ಫೀಲ್ಡಿಗಿಳಿದು ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿ ಸರ್ಚ್ ಮಾಡುವುದು ಇಂದಿನ ತುರ್ತು ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು