7:36 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ!

10/09/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸರಾಗುತ್ತಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ, ಹೋಬಳಿ ಮಟ್ಟಗಳಲ್ಲಿ ಅಕ್ರಮ ಚಟುವಟಿಕೆಗಳು ಜೋರಾಗಿ

ನಡೆಯುತ್ತಿದೆ. ಆದರೆ ಪೊಲೀಸ್ ಇಲಾಖೆ  ಸುಮ್ಮನಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿ ಕೊಟ್ಟಿದೆ. ಸಾರ್ವಜನಿಕ  ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.ಬಡ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ.ಯುವಕರಿಗೆ ಸಾರಾಯಿ ಮಾತ್ರ ಬೇಕು. ಇಂದಿನ ದಿನಗಳಲ್ಲಿ ದುಡಿದರು ಜೀವನ ಸಾಯಿಸುವುದು ಕಷ್ಟ. ಹಾಗಿರುವಾಗ ಬೆಳಗ್ಗೆನೇ ಯುವಕರು ಮದ್ಯಕ್ಕೆ ಮೊರೆ ಹೋದರೆ ಹೇಗೆ ಎಂದು ಹಿರಿಯರು ತಲೆ ಬಿಸಿ ಮಾಡಿಕೊಳ್ಳುತ್ತಾರೆ. ಸಾರಾಯಿ ಜತೆ ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಯೂ ಬಹಳಷ್ಟು ಸಕ್ರೀಯವಾಗಿದೆ. ಮನೆ ಸೊತ್ತು ಮಾರಿ ಮಟ್ಕಾ ಆಟವಾಡುತ್ತಿರುವ ಹಲವು ಪ್ರಸಂಗಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಬಡ ಕುಟುಂಬಗಳನ್ನು ರಕ್ಷಿಸ ಬಹುದಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಕುಡಿತದಿಂದ ಸಣ್ಣ ಯುವಕರು ಹಾಳಾಗುತ್ತಿದ್ದಾರೆ. ತಂದೆ-ತಾಯಿಯರ ಕೇಳೋರೆ ಇಲ್ಲ. ಬಡ ಕುಟುಂಬಗಳು ಬೀದಿಗೆ ಬರಬಾರದು, ಯುವಕರು ಹಾಳಾಗಬಾರದು ಎಂದರೆ ಜಿಲ್ಲೆಯ ಪೊಲೀಸರು ತಾವೇ ಖುದ್ದಾಗಿ ಫೀಲ್ಡಿಗಿಳಿದು ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿ ಸರ್ಚ್ ಮಾಡುವುದು ಇಂದಿನ ತುರ್ತು ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು