2:18 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ!

10/09/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸರಾಗುತ್ತಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ, ಹೋಬಳಿ ಮಟ್ಟಗಳಲ್ಲಿ ಅಕ್ರಮ ಚಟುವಟಿಕೆಗಳು ಜೋರಾಗಿ

ನಡೆಯುತ್ತಿದೆ. ಆದರೆ ಪೊಲೀಸ್ ಇಲಾಖೆ  ಸುಮ್ಮನಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿ ಕೊಟ್ಟಿದೆ. ಸಾರ್ವಜನಿಕ  ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.ಬಡ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ.ಯುವಕರಿಗೆ ಸಾರಾಯಿ ಮಾತ್ರ ಬೇಕು. ಇಂದಿನ ದಿನಗಳಲ್ಲಿ ದುಡಿದರು ಜೀವನ ಸಾಯಿಸುವುದು ಕಷ್ಟ. ಹಾಗಿರುವಾಗ ಬೆಳಗ್ಗೆನೇ ಯುವಕರು ಮದ್ಯಕ್ಕೆ ಮೊರೆ ಹೋದರೆ ಹೇಗೆ ಎಂದು ಹಿರಿಯರು ತಲೆ ಬಿಸಿ ಮಾಡಿಕೊಳ್ಳುತ್ತಾರೆ. ಸಾರಾಯಿ ಜತೆ ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಯೂ ಬಹಳಷ್ಟು ಸಕ್ರೀಯವಾಗಿದೆ. ಮನೆ ಸೊತ್ತು ಮಾರಿ ಮಟ್ಕಾ ಆಟವಾಡುತ್ತಿರುವ ಹಲವು ಪ್ರಸಂಗಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಬಡ ಕುಟುಂಬಗಳನ್ನು ರಕ್ಷಿಸ ಬಹುದಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಕುಡಿತದಿಂದ ಸಣ್ಣ ಯುವಕರು ಹಾಳಾಗುತ್ತಿದ್ದಾರೆ. ತಂದೆ-ತಾಯಿಯರ ಕೇಳೋರೆ ಇಲ್ಲ. ಬಡ ಕುಟುಂಬಗಳು ಬೀದಿಗೆ ಬರಬಾರದು, ಯುವಕರು ಹಾಳಾಗಬಾರದು ಎಂದರೆ ಜಿಲ್ಲೆಯ ಪೊಲೀಸರು ತಾವೇ ಖುದ್ದಾಗಿ ಫೀಲ್ಡಿಗಿಳಿದು ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿ ಸರ್ಚ್ ಮಾಡುವುದು ಇಂದಿನ ತುರ್ತು ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು