4:37 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ

01/08/2021, 08:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನಾದ ಕಷ್ಟಕಾಲದ ನಡುವೆಯೂ ಸ್ವಲ್ಪ ವಿಶ್ರಾಂತಿ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕ್ಷೇತ್ರದುದ್ಧಕ್ಕೂ ಜನರಾಡಿಕೊಳ್ಳುತ್ತಿದ್ದಾರೆ.

ಶಾಸಕರ ಸ್ಥಳೀಯ ಅನುದಾನದಡಿ 43.50 ಲಕ್ಷ ರೂ ವೆಚ್ಚದಲ್ಲಿ 5 ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ.

ನಬಾರ್ಡ್ ಅನುದಾನದಡಿಯಲ್ಲಿ 38 ಲಕ್ಷ  ರೂ.ವೆಚ್ಚದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಸಿಡಿಲು ಬಡಿದು ಮೃತರಾದ ಜಿಂದಮ್ಮ ಗಂಜಮ್ ಶರವಲೀ ಕುಟುಂಬಕ್ಕೆ ಶಾಸಕರು 5 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ. ಜೆ ಮಲ್ಲಪೂರ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಡಿ 10.50 ಲಕ್ಷ ರೂ. ವೆಚ್ಚದಲ್ಲಿ  ಶಾಲಾ ಕೊಠಡಿ ಉದ್ಘಾಟನೆ ನಡೆದಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ ನಡೆದಿದೆ. ಇದೆಲ್ಲ ಶಾಸಕರ ಜನಪರ ಕಾರ್ಯವೈಖರಿ ಎಂದು ಕ್ಷೇತ್ರದ ಜನತೆ ಹೇಳಿಕೊಳ್ಳುತ್ತಿದ್ದಾರೆ. 

ಸಂದರ್ಭದಲ್ಲಿ ಅಧಿಕಾರಿಗಳು  ಊರಿನ ಹಿರಿಯ ಮುಖಂಡರು, ಗ್ರಾಪಂ, ಅಧ್ಯಕ್ಷರು, ಸದಸ್ಯರು ಸುತ್ತ ಮುತ್ತಲಿನ ಹಿರಿಯ ಮುಖಂಡರು ಗ್ರಾಮಸ್ಥರು  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು