11:25 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ರಾಯಚೂರು: ಮತ್ತೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

12/02/2025, 10:49

ಶಿವು ರಾಠೋಡ ಹುಣಸಗಿ ರಾಯಚೂರು

Info.reporterkarnata@gmail.com

ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರಶೇಖರ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.
ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಪೈಶಾಚಿಕ ಘಟನೆ ನಡೆದಿದೆ. ಆದರೂ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಿಲ್ಲ. ಇಂತಹ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಇನ್ನೆಷ್ಟು ಮಕ್ಕಳ ಜೀವ ಹೋಗುವುದೋ ಕಳೆ ಯಬೇಕು ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು