12:58 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ರಾಯಚೂರು: ಮತ್ತೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

12/02/2025, 10:49

ಶಿವು ರಾಠೋಡ ಹುಣಸಗಿ ರಾಯಚೂರು

Info.reporterkarnata@gmail.com

ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರಶೇಖರ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.
ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಪೈಶಾಚಿಕ ಘಟನೆ ನಡೆದಿದೆ. ಆದರೂ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಿಲ್ಲ. ಇಂತಹ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಇನ್ನೆಷ್ಟು ಮಕ್ಕಳ ಜೀವ ಹೋಗುವುದೋ ಕಳೆ ಯಬೇಕು ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು