9:19 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು