8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು