11:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು