7:06 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿ 

22/05/2021, 15:15

ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಹಿಂದೆ ಸಹ  ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ. ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ ಬಗ್ಗೆ ಚರ್ಚೆ ಆಶೀರ್ವಾದ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಡಿ.ಕೆ.ಶಿವಕುಮಾರ್‌ ದೇವರ ದರ್ಶನ ಪಡೆದರು.  ಅರ್ಚಕರಾದ ವಿಶ್ವನಾಥ ಶಾಸ್ತ್ರಿ ಅವರು ವಿಶೇಷ ಪೂಜೆ ನೆರವೇರಿಸಿದರು . ನಂತರ ಪ್ರಸಿದ್ಧ ಜ್ಯೋತಿಷ ಶಾಸ್ತ್ರ ತಜ್ಞರಾದ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು. ನಂತರ ಅವರನ್ನು ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಮತ್ತು ಸಹೋದರ ವಿಶ್ವನಾಥ ಶಾಸ್ತ್ರಿ ಅವರು ದೇವಸ್ಥಾನ ಆವರಣದಲ್ಲಿ ಸನ್ಮಾನಿಸಿದರು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ , ನಿರ್ದೇಶಕ ಅನಿಲ್‌ಕುಮಾರ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು