8:25 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

05/06/2025, 20:21

ಬೆಂಗಳೂರು(reporterkarnataka.com): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಈ ದುರಂತವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಘಟನೆಯು ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

* *ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು:*
ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವಾನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ನುಡಿದರು.

* *ಕೊಲೆಯೆಂದು ಬಿಂಬಿಸುವುದು ಸರಿಯಲ್ಲ:*
ವಿಜಯೋತ್ಸವದ ವೇಳೆ ಸಂಭವಿಸಿರುವ ಘಟನೆ ಅಚಾನಕ್ಕಾಗಿ ನಡೆದಿರುವುದು. ಘಟನೆಯ ಬಗ್ಗೆ ಎಲ್ಲರಿಗೂ ಅತ್ಯಂತ ನೋವು ಇದೆ. ಆದರೆ, ಇದೊಂದು ಸರ್ಕಾರದ ಕೊಲೆಯೆಂದು ಬಿಂಬಿಸುವುದು ಸರಿಯಲ್ಲ. ಈ ರೀತಿ ಘಟನೆ ಆಗಲಿ ಎಂದು ನಾವಾಗಲಿ, ನೀವಾಗಲಿ ಯಾರಾದರೂ ಬಯಸಬಹುದಾ ಎಂದು ಸಚಿವರು ಪ್ರಶ್ನಿಸಿದರು.
ಘಟನೆಯ ಜವಾಬ್ದಾರಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನಾವೆಲ್ಲರೂ ಜವಾಬ್ದಾರಿ ಸ್ಥಾನದಲ್ಲಿ ಇರುವವರು. ಅತ್ಯಂತ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಹೇಳಿದರು.

* *ಮೃತರ ಕುಟುಂಬಗಳಿಗೆ ಸಾಂತ್ವಾನ:*
ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗ, ವಾರಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರಲ್ಲದೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು