3:27 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

12/11/2025, 15:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ನಡೆದ ಕಾರ್ ಬಾಂಬ್ ಪ್ರಕರಣ ಇಡೀ ದೇಶ ಆಲೋಚನೆ ಮಾಡುವ ಪರಿಸ್ಥಿತಿ ಕಳೆದ 10ರಿಂದ 11 ವರ್ಷ ನಿಯಂತ್ರಣಕ್ಕೆ ಬಂದಿದ್ದಂತಹ ಈ ಭಯೋತ್ಪಾದಕ ಕೃತ್ಯಗಳು, ಇವರನ್ನು ಹೀಗೆ ಬಿಡಬಾರದು ಎಂದು ಭಯೋತ್ಪಾದಕರು ಮನಸ್ಸು ಮಾಡಿ ಕೆಂಪು ಕೋಟೆ ಬಳಿ ಬಾಂಬ್ ಪ್ರಯತ್ನ ನಡೆದಿದೆ ಎನಿಸುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು ಇಡೀ ದೇಶವೇ ಇದನ್ನ ಖಂಡಿಸಬೇಕಿದೆ ಮತ್ತು ಇದರ ವಿರುದ್ಧ ಜನಜಾಗೃತಿ ನಿರ್ಮಾಣ ಆಗಬೇಕಿದೆ. ಭಯೋತ್ಪಾದಕರಿಗೆ ಧರ್ಮ ಇಲ್ಲ ಎಂದು ಬಹಳಷ್ಟು ಜನ ಮೊಂಡುವಾದ ಮಾಡುತ್ತಿದ್ದಾರೆ. ಆದರೆ ಭಯೋತ್ಪಾದಕರಾದವರೆಲ್ಲರೂ ಸಹ ಒಂದೇ ಧರ್ಮದವರು ಎನ್ನುವುದು ಚರ್ಚೆಯಾಗಬೇಕು. ಎಲ್ಲಾ ಧರ್ಮದವರು ಇದನ್ನ ಖಂಡಿಸುವ ಅವಶ್ಯಕತೆ ಇದೆ. ಮನುಕುಲದ ನಾಶಕ್ಕೆ ಹೊರಟವರೆ ಹೊರತು ಯಾವ ಧರ್ಮವನ್ನು ಉಳಿಸುವ ಹೋರಾಟ ಇವರದ್ದಲ್ಲ, ಜನರ ರಕ್ತ ಜನರ ಪ್ರಾಣ ಹಿಂಡುವ ದಂಧೆ ಇವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಘಟನೆಯನ್ನು ರಾಜಕಾರಣದಿಂದ ಯಾವುದೇ ಕಾರಣಕ್ಕೂ ನೋಡಬಾರದು. ಸರಿಯಾದ ರೀತಿಯಲ್ಲಿ ವಿಚಾರಣೆ ನಡೆದು ಇಂತಹವರ ಮೂಲಬೇರನ್ನು ಕೆದಕಬೇಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಎಫ್ಐಆರ್ ಹಾಕಿ ಕೈ ತೊಳೆದುಕೊಳ್ಳುತ್ತಿದ್ದರು. ಮೋದಿಯವರು ಬಂದ ನಂತರ ಸ್ವಲ್ಪ ನಿಯಂತ್ರಣದಲ್ಲಿದೆ. ಪಾಕಿಸ್ತಾನದ ಪ್ರಯತ್ನ ಇದರಲ್ಲಿ ಏನಿದೆ ಎಂದು ಹೊರ ತಂದು ಇಡೀ ವಿಶ್ವಕ್ಕೆ ತೋರಿಸಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು