11:51 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

12/11/2025, 15:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ನಡೆದ ಕಾರ್ ಬಾಂಬ್ ಪ್ರಕರಣ ಇಡೀ ದೇಶ ಆಲೋಚನೆ ಮಾಡುವ ಪರಿಸ್ಥಿತಿ ಕಳೆದ 10ರಿಂದ 11 ವರ್ಷ ನಿಯಂತ್ರಣಕ್ಕೆ ಬಂದಿದ್ದಂತಹ ಈ ಭಯೋತ್ಪಾದಕ ಕೃತ್ಯಗಳು, ಇವರನ್ನು ಹೀಗೆ ಬಿಡಬಾರದು ಎಂದು ಭಯೋತ್ಪಾದಕರು ಮನಸ್ಸು ಮಾಡಿ ಕೆಂಪು ಕೋಟೆ ಬಳಿ ಬಾಂಬ್ ಪ್ರಯತ್ನ ನಡೆದಿದೆ ಎನಿಸುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು ಇಡೀ ದೇಶವೇ ಇದನ್ನ ಖಂಡಿಸಬೇಕಿದೆ ಮತ್ತು ಇದರ ವಿರುದ್ಧ ಜನಜಾಗೃತಿ ನಿರ್ಮಾಣ ಆಗಬೇಕಿದೆ. ಭಯೋತ್ಪಾದಕರಿಗೆ ಧರ್ಮ ಇಲ್ಲ ಎಂದು ಬಹಳಷ್ಟು ಜನ ಮೊಂಡುವಾದ ಮಾಡುತ್ತಿದ್ದಾರೆ. ಆದರೆ ಭಯೋತ್ಪಾದಕರಾದವರೆಲ್ಲರೂ ಸಹ ಒಂದೇ ಧರ್ಮದವರು ಎನ್ನುವುದು ಚರ್ಚೆಯಾಗಬೇಕು. ಎಲ್ಲಾ ಧರ್ಮದವರು ಇದನ್ನ ಖಂಡಿಸುವ ಅವಶ್ಯಕತೆ ಇದೆ. ಮನುಕುಲದ ನಾಶಕ್ಕೆ ಹೊರಟವರೆ ಹೊರತು ಯಾವ ಧರ್ಮವನ್ನು ಉಳಿಸುವ ಹೋರಾಟ ಇವರದ್ದಲ್ಲ, ಜನರ ರಕ್ತ ಜನರ ಪ್ರಾಣ ಹಿಂಡುವ ದಂಧೆ ಇವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಘಟನೆಯನ್ನು ರಾಜಕಾರಣದಿಂದ ಯಾವುದೇ ಕಾರಣಕ್ಕೂ ನೋಡಬಾರದು. ಸರಿಯಾದ ರೀತಿಯಲ್ಲಿ ವಿಚಾರಣೆ ನಡೆದು ಇಂತಹವರ ಮೂಲಬೇರನ್ನು ಕೆದಕಬೇಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಎಫ್ಐಆರ್ ಹಾಕಿ ಕೈ ತೊಳೆದುಕೊಳ್ಳುತ್ತಿದ್ದರು. ಮೋದಿಯವರು ಬಂದ ನಂತರ ಸ್ವಲ್ಪ ನಿಯಂತ್ರಣದಲ್ಲಿದೆ. ಪಾಕಿಸ್ತಾನದ ಪ್ರಯತ್ನ ಇದರಲ್ಲಿ ಏನಿದೆ ಎಂದು ಹೊರ ತಂದು ಇಡೀ ವಿಶ್ವಕ್ಕೆ ತೋರಿಸಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು