11:26 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

12/11/2025, 15:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ನಡೆದ ಕಾರ್ ಬಾಂಬ್ ಪ್ರಕರಣ ಇಡೀ ದೇಶ ಆಲೋಚನೆ ಮಾಡುವ ಪರಿಸ್ಥಿತಿ ಕಳೆದ 10ರಿಂದ 11 ವರ್ಷ ನಿಯಂತ್ರಣಕ್ಕೆ ಬಂದಿದ್ದಂತಹ ಈ ಭಯೋತ್ಪಾದಕ ಕೃತ್ಯಗಳು, ಇವರನ್ನು ಹೀಗೆ ಬಿಡಬಾರದು ಎಂದು ಭಯೋತ್ಪಾದಕರು ಮನಸ್ಸು ಮಾಡಿ ಕೆಂಪು ಕೋಟೆ ಬಳಿ ಬಾಂಬ್ ಪ್ರಯತ್ನ ನಡೆದಿದೆ ಎನಿಸುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು ಇಡೀ ದೇಶವೇ ಇದನ್ನ ಖಂಡಿಸಬೇಕಿದೆ ಮತ್ತು ಇದರ ವಿರುದ್ಧ ಜನಜಾಗೃತಿ ನಿರ್ಮಾಣ ಆಗಬೇಕಿದೆ. ಭಯೋತ್ಪಾದಕರಿಗೆ ಧರ್ಮ ಇಲ್ಲ ಎಂದು ಬಹಳಷ್ಟು ಜನ ಮೊಂಡುವಾದ ಮಾಡುತ್ತಿದ್ದಾರೆ. ಆದರೆ ಭಯೋತ್ಪಾದಕರಾದವರೆಲ್ಲರೂ ಸಹ ಒಂದೇ ಧರ್ಮದವರು ಎನ್ನುವುದು ಚರ್ಚೆಯಾಗಬೇಕು. ಎಲ್ಲಾ ಧರ್ಮದವರು ಇದನ್ನ ಖಂಡಿಸುವ ಅವಶ್ಯಕತೆ ಇದೆ. ಮನುಕುಲದ ನಾಶಕ್ಕೆ ಹೊರಟವರೆ ಹೊರತು ಯಾವ ಧರ್ಮವನ್ನು ಉಳಿಸುವ ಹೋರಾಟ ಇವರದ್ದಲ್ಲ, ಜನರ ರಕ್ತ ಜನರ ಪ್ರಾಣ ಹಿಂಡುವ ದಂಧೆ ಇವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಘಟನೆಯನ್ನು ರಾಜಕಾರಣದಿಂದ ಯಾವುದೇ ಕಾರಣಕ್ಕೂ ನೋಡಬಾರದು. ಸರಿಯಾದ ರೀತಿಯಲ್ಲಿ ವಿಚಾರಣೆ ನಡೆದು ಇಂತಹವರ ಮೂಲಬೇರನ್ನು ಕೆದಕಬೇಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಎಫ್ಐಆರ್ ಹಾಕಿ ಕೈ ತೊಳೆದುಕೊಳ್ಳುತ್ತಿದ್ದರು. ಮೋದಿಯವರು ಬಂದ ನಂತರ ಸ್ವಲ್ಪ ನಿಯಂತ್ರಣದಲ್ಲಿದೆ. ಪಾಕಿಸ್ತಾನದ ಪ್ರಯತ್ನ ಇದರಲ್ಲಿ ಏನಿದೆ ಎಂದು ಹೊರ ತಂದು ಇಡೀ ವಿಶ್ವಕ್ಕೆ ತೋರಿಸಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು