3:37 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ: ಬಿಜೆಪಿ ಸಂಸದ, ಶಾಸಕರ ನಿಯೋಗ ಮುಖ್ಯಮಂತ್ರಿ ಭೇಟಿ; ಮಧ್ಯ ಪ್ರವೇಶಕ್ಕೆ ಆಗ್ರಹ

01/08/2025, 18:53

ಬೆಂಗಳೂರು(repoeterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.
ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ.

ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ರವರನ್ನು ಸಹ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಸೇರಿದಂತೆ ಶಾಸಕರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು