9:11 PM Thursday14 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ…

ಇತ್ತೀಚಿನ ಸುದ್ದಿ

ರೆಡ್ಡಿ ಪಟಾಲಂ ರಾಜಕೀಯವಾಗಿ ಬೆಳೆಯಲು ಅವಕಾಶ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ

08/11/2024, 19:41

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ನಿಮಗೆ ಕೈ ಮುಗಿದು ಕೇಳುತ್ತೇನೆ, ಜನಾರ್ದನ ರೆಡ್ಡಿ ಪಟಾಲಂ ರಾಜಕೀಯ ಬೆಳೆಯಲು ಅವಕಾಶ ಬೇಡ. ಇದು ಸಂಡೂರು ಉಪ ಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು.
ಬನ್ನಿಹಟ್ಟಿ ಸಮಾವೇಶದಲ್ಲಿ ಶುಕ್ರವಾರ ಭಾಷಣ ಮಾಡಿದ ಅವರು, ಇದು ಉಪ ಚುನಾವಣೆ ಆದರೂ ಬಹಳ ಮಹತ್ವದ ಚುನಾವಣೆ. ಬಿಜೆಪಿಯವರು ಸುಳ್ಳು ಹೇಳಿ, ಹಣ ಖರ್ಚು ಮಾಡಿ ಸಂಡೂರು ಗೆಲ್ಲಲು ಯೋಜನೆ ಮಾಡಿದ್ದಾರೆ ಎಂದರು.
ಜನಾರ್ದನ ರೆಡ್ಡಿ ಯಾರು, ಏನು ಎಂದು ನಿಮಗೆಲ್ಲಾ ಗೊತ್ತಿದೆ. ಬಳ್ಳಾರಿಯನ್ನ ರಿಪಬ್ಲಿಕ್ ಬಳ್ಳಾರಿ ಮಾಡದಂತವರು. ಅಕ್ರಮ ಗಣಿಗಾರಿಕೆ ಮಾಡಿ ಲೂಟಿ ಮಾಡಿದಂತವರು. ಈ ಚುನಾವಣೆಯಲ್ಲಿ ಗೆಲ್ಲಿಸುತ್ತೇವೆಂದು ಜವಾಬ್ದಾರಿ ತಗೊಂಡಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಬ್ರದರ್ಸ್ ಸೇರಿ ಬಳ್ಳಾರಿ ಜಿಲ್ಲೆಯನ್ನ ಲೂಟಿ ಮಾಡುತ್ತಿದ್ದರು. ರೆಡ್ಡಿ ಬ್ರದರ್ಸ್, ರಾಮುಲು ಸೇರಿ ಇಲ್ಲಿ ಬಡತನ ಇದೆ, ಶೋಷಣೆ ಇತ್ತು. ಅವರ ಪಟಾಲಂ ಬಳ್ಳಾರಿ ಜಿಲ್ಲೆಯನ್ನ ಹಾಳು ಮಾಡಿದ್ದಾರೆ, ಅಕ್ರಮ ಗಣಿಗಾರಿಕೆ ಮಾಡಿದ್ದಾರೆ, ಗುಡ್ಡಗಳನ್ನು ನೆಲಸಮ ಮಾಡುತ್ತಿದ್ದಾರೆಂದು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು. ಇವರ ಕಪಿಮುಷ್ಟಿಯಿಂದ ಬಳ್ಳಾರಿಯನ್ನ ತಪ್ಪಿಸಬೇಕಿತ್ತು.
ನಾನೊಮ್ಮೆ ಅಲ್ಲಿಪುರಕ್ಕೆ ಬಂದಿದ್ದೆ. ಯಾರದೋ ಮನೆಯಲ್ಲಿ ನೀರು ಕುಡಿಯುವುದಕ್ಕೆ ಹೋಗಿದ್ದೆ. ಆಗ ಆ ಮನೆಯವರು ನೀವು ಬಂದಿದ್ದು ಯಾರಿಗೂ ಹೇಳಬೇಡಿ ಸರ್ ಎಂದರು. ಅವರು ಬೇಕಾ ಮತ್ತೇ? ಅವರ ಅಭ್ಯರ್ಥಿ ಗೆಲ್ಲಬೇಕಾ ಮತ್ತೆ ಎಂದ ಸಿಎಂ ಪ್ರಶ್ನಿಸಿದರು.
ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್‌ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.
ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು