4:54 AM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ

18/05/2021, 17:48

ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ .

ಕಳೆದ ಒಂದು ತಿಂಗಳಿಂದ ಕಾಳಸಂತೆ ಯಲ್ಲಿ ಇಂಜೆಕ್ಷನ್ ಮಾರಾಟವನ್ನು ಇವರು ನಡೆಸುತ್ತಿದ್ದರೆನ್ನಲಾಗಿದ್ದು , ಒಂದು ಇಂಜೆಕ್ಷನ್ ಸುಮಾರು 30 ಸಾವಿರ ರೂಪಾಯಿಗೆ ಮಾರಾಟ ಮಾಡುವ ಮೂಲಕ ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ ನಡೆಸುತ್ತಿದ್ದರೆನ್ನಲಾಗಿದೆ. .ಜಾಲದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವೈದ್ಯರು ಇರುವ ಶಂಕೆ ಇದ್ದು , ವಿಚಾರಣೆಗೆ ಕರೆತಂದವರನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ.

ಆದರೆ , ರಾಜಕೀಯ ಪ್ರಭಾವ ಬಳಸಿಕ ಕೊಂಡು ಬಂಧಿತ ಆರೋಪಿಗಳನ್ನು ರಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿದೆಯೆಂಬ ದೂರುಗಳು ಕೇಳಿ ಬರುತ್ತಿವೆ .

ಇತ್ತೀಚಿನ ಸುದ್ದಿ

ಜಾಹೀರಾತು