10:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ

18/05/2021, 17:48

ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ .

ಕಳೆದ ಒಂದು ತಿಂಗಳಿಂದ ಕಾಳಸಂತೆ ಯಲ್ಲಿ ಇಂಜೆಕ್ಷನ್ ಮಾರಾಟವನ್ನು ಇವರು ನಡೆಸುತ್ತಿದ್ದರೆನ್ನಲಾಗಿದ್ದು , ಒಂದು ಇಂಜೆಕ್ಷನ್ ಸುಮಾರು 30 ಸಾವಿರ ರೂಪಾಯಿಗೆ ಮಾರಾಟ ಮಾಡುವ ಮೂಲಕ ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ ನಡೆಸುತ್ತಿದ್ದರೆನ್ನಲಾಗಿದೆ. .ಜಾಲದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವೈದ್ಯರು ಇರುವ ಶಂಕೆ ಇದ್ದು , ವಿಚಾರಣೆಗೆ ಕರೆತಂದವರನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ.

ಆದರೆ , ರಾಜಕೀಯ ಪ್ರಭಾವ ಬಳಸಿಕ ಕೊಂಡು ಬಂಧಿತ ಆರೋಪಿಗಳನ್ನು ರಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿದೆಯೆಂಬ ದೂರುಗಳು ಕೇಳಿ ಬರುತ್ತಿವೆ .

ಇತ್ತೀಚಿನ ಸುದ್ದಿ

ಜಾಹೀರಾತು