8:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ

18/05/2021, 17:48

ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ .

ಕಳೆದ ಒಂದು ತಿಂಗಳಿಂದ ಕಾಳಸಂತೆ ಯಲ್ಲಿ ಇಂಜೆಕ್ಷನ್ ಮಾರಾಟವನ್ನು ಇವರು ನಡೆಸುತ್ತಿದ್ದರೆನ್ನಲಾಗಿದ್ದು , ಒಂದು ಇಂಜೆಕ್ಷನ್ ಸುಮಾರು 30 ಸಾವಿರ ರೂಪಾಯಿಗೆ ಮಾರಾಟ ಮಾಡುವ ಮೂಲಕ ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ ನಡೆಸುತ್ತಿದ್ದರೆನ್ನಲಾಗಿದೆ. .ಜಾಲದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವೈದ್ಯರು ಇರುವ ಶಂಕೆ ಇದ್ದು , ವಿಚಾರಣೆಗೆ ಕರೆತಂದವರನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ.

ಆದರೆ , ರಾಜಕೀಯ ಪ್ರಭಾವ ಬಳಸಿಕ ಕೊಂಡು ಬಂಧಿತ ಆರೋಪಿಗಳನ್ನು ರಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿದೆಯೆಂಬ ದೂರುಗಳು ಕೇಳಿ ಬರುತ್ತಿವೆ .

ಇತ್ತೀಚಿನ ಸುದ್ದಿ

ಜಾಹೀರಾತು