4:02 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಖ್ಯಾತ ನಟ ದರ್ಶನ್ ಮೈಸೂರಿನಲ್ಲಿ ಬಂಧನ

11/06/2024, 13:05

ಮೈಸೂರು(reporterkarnataka.com): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಮೈಸೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ.
ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ನಟನನ್ನು ಬಂಧಿಸಲಾಯಿತು. ನಂತರ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಹೋದರು. ಮೈಸೂರಿನಲ್ಲಿ ಕೊಲೆ ನಡೆದಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಶವ ಪತ್ತೆಯಾಗಿತ್ತು.
ಮೂಲತಃ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣದ ತನಿಖೆಯನ್ನು ಬೆಂಗಳೂರಿನ ಸ್ಥಳೀಯ ಪೊಲೀಸರು ನಡೆಸುತ್ತಿದ್ದರು. ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ವಿಚಾರಣೆಗೆ ಕರೆದೊಯ್ದಿದ್ದು, ದರ್ಶನ್ ಅವರ ಹೆಸರೂ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದರ್ಶನ್ ಅವರ ಸ್ನೇಹಿತೆಯಾದ ಪವಿತ್ರಾ ಗೌಡಗೆ ಆನ್‌ಲೈನ್ ಕಿರುಕುಳ ನೀಡಿದ್ದಕ್ಕಾಗಿ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಎರಡು ತಿಂಗಳ ಹಿಂದೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ದರ್ಶನ್ ಒಡೆತನದ ಮೈಸೂರು ಫಾರ್ಮ್ ಹೌಸ್‌ಗೆ ಕರೆದೊಯ್ದು ಚಿತ್ರಹಿಂಸೆ ನೀಡಿ ಕೊಲೆಗೈದು ಶವವನ್ನು ಕಾಮಾಕ್ಷಿಪಾಳ್ಯದ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯು ಚಿತ್ರದುರ್ಗದಲ್ಲಿ ದಾಖಲಾಗಿರುವ ನಾಪತ್ತೆ ದೂರಿನ ಕಡೆಗೆ ಪೊಲೀಸರಿಗೆ ಕಾರಣವಾಯಿತು. ತನಿಖೆಯ ವೇಳೆ ಹಣಕಾಸು ಸಮಸ್ಯೆಯಿಂದ ರೇಣುಕಾ ಸ್ವಾಮಿಯನ್ನು ಕೊಂದಿರುವುದಾಗಿ ಆರೋಪಿಸಿ ಮೂವರು ಶರಣಾಗಿದ್ದಾರೆ. ಆದಾಗ್ಯೂ, ಹೆಚ್ಚಿನ ತನಿಖೆ ಅವರನ್ನು ದರ್ಶನ್‌ಗೆ ಕರೆದೊಯ್ಯಿತು.
ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ನಟನ ನಿವಾಸದ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ತೂಗುದೀಪ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಹತ್ತು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಈ ಹಂತದಲ್ಲಿ ನಾವು ಯಾವುದೇ ಸೂಕ್ಷ್ಮ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು