ಇತ್ತೀಚಿನ ಸುದ್ದಿ
ಸಮಾನತೆ, ಸಾಮರಸ್ಯ ಸಾರಿದ ಜಗದ್ಗರು ರೇಣುಕಾಚಾರ್ಯ: ತಹಶೀಲ್ದಾರ್ ಮಂಜುನಾಥ್ ಹಿರೇಮಠ
03/03/2026, 01:58
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com
ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ, ಸಿದ್ಧಾಂತ ಮತ್ತು ಬೋಧನೆಯ ಮೂಲಕ ಸಾಮಾಜಿಕ ಸುಧಾರಣೆ ಆದ್ಯತೆ ನೀಡಿದ್ದರು ಎಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು.
ಇಲ್ಲಿನ ಪುರಸಭೆ ಕಚೇರಿಯಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯ ಹೇಳಿದ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಸಂದೇಶಗಳು ಇಂದು ಪ್ರಸ್ತುತವಾಗಿವೆ ಎಂದು ಹೇಳಿದರು.
ಬಿಜೆಪಿ ಕಚೇರಿಯಲ್ಲೂ ಜಯಂತೋತ್ಸವವನ್ನು ಆಚರಿಸಲಾಯಿತು. ಮಾಜಿ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ,
ರೇಣುಕಾಚಾರ್ಯರ ಆದರ್ಶಗಳನ್ನು ನಾವು ಪಾಲಿಸಿಕೊಂಡು ಹೋಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಂಗಮ ಸಮಾಜದ ಯುವ ಮುಖಂಡರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.












