4:22 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌:  ಸರಕಾರದ ವಿರುದ್ಧ  ಹೈಕೋರ್ಟ್‌ ಗರಂ

09/03/2022, 08:52

ಬೆಂಗಳೂರು(reporterkarnataka.com): ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ.

ಇದಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.‌ ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು