12:19 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌:  ಸರಕಾರದ ವಿರುದ್ಧ  ಹೈಕೋರ್ಟ್‌ ಗರಂ

09/03/2022, 08:52

ಬೆಂಗಳೂರು(reporterkarnataka.com): ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ.

ಇದಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.‌ ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು