5:31 AM Wednesday4 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು